ಸುದ್ದಿ

ಬೆಂಗಳೂರಿನಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ

ಬೆಂಗಳೂರು: ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ, ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ನಾಳೆ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button