ಸುದ್ದಿ

ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ

ಬೆಂಗಳೂರು, ಜೂನ್​ 16: ಚಿತ್ರದುರ್ಗದ ದರ್ಶನ್ (Darshan) ಅಭಿಮಾನಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಆ್ಯಂಡ್​ ಗ್ಯಾಂಗ್​ ಸದ್ಯ ಜೈಲು ಕಂಬಿ ಎಣಿಸುತ್ತಿದ್ದಾರೆ. ನಿನ್ನೆ ಕಸ್ಟಡಿ ಅಂತ್ಯವಾಗಿದ್ದ ಕಾರಣಕ್ಕೆ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ಬಳಿಕ ದರ್ಶನ್‌ ಸೇರಿದಂತೆ 13 ಆರೋಪಿಗಳನ್ನ ಜೂನ್‌ 20 ರವರೆಗೆ ಅಂದ್ರೆ ಐದು ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಇದೆಲ್ಲದರ ಮಧ್ಯೆ ಈ ಪ್ರಕರಣವನ್ನು ವರದಿ ಮಾಡಲು ಹೋಗಿದ್ದ ಓರ್ವ ಪತ್ರಕರ್ತನಿಗೆ ದರ್ಶನ್​ ಅಭಿಮಾನಿಗಳು ಹಲ್ಲೆ ಮಾಡಿರುವುದಾಗಿ ವರದಿ ಆಗಿದೆ.

ದರ್ಶನ್​ ಈ ಕೊಲೆ ಪ್ರಕರಣದಲ್ಲಿ ಸಿಕ್ಕಿಕೊಂಡಾಗಿನಿಂದ ಅವರು ಅಭಿಮಾನಿಗಳು ಅವರ ವಿರುದ್ಧ ತಮ್ಮ ಧ್ವನಿ ಎತ್ತಿದ್ದಾರೆ. ನಾವು ನಿನ್ನ ಪರವಾಗಿದ್ದೇವೆ ಬಾಸ್​ ಎಂದೆಲ್ಲಾ ಹೇಳುತ್ತಿದ್ದಾರೆ. ಅವರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಇದೆಲ್ಲವನ್ನು ನೋಡುತ್ತಿದ್ದರೇ ದರ್ಶನ್​ ಅವರಂತೆಯೇ ಅವರ ಅಭಿಮಾನಿಗಳು ಕೂಡ ಒರಟು ಸ್ವಭಾವದವರು ಎನ್ನಲಾಗುತ್ತಿದೆ. ಆದರೆ ಇದೇ ಒರಟು ಸ್ವಭಾವದ ಕೆಲ ದರ್ಶನ್ ಅಭಿಮಾನಿಗಳು ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button