ಯುವತಿಯರಿಗೆ ಆಮಿಷವೊಡ್ಡಿ ಮನೆಗೆ ಕರೆಸಿಕೊಂಡು ವೇಶ್ಯಾವಾಟಿಕೆ: ಮೂವರು ಮಹಿಳೆಯರಿಗೆ ಕಠಿಣ ಶಿಕ್ಷೆ
ಹಣ ನೀಡುವ ಆಮಿಷವೊಡ್ಡಿ ಮನೆಗೆ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಭದ್ರಾವತಿಯ ಮೂವರು ಮಹಿಳೆಯರಿಗೆ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.61 ಲಕ್ಷ ರೂ. ದಂಡ ವಿಧಿಸಿ ಶನಿವಾರ ಆದೇಶಿಸಿದೆ.ಭದ್ರಾವತಿಯ ಚಂದ್ರಕಲಾ, ಶಿಲ್ಪಾ ಮತ್ತು ಕವಿತಾ ಶಿಕ್ಷೆಗೆ ಒಳಗಾದವರು. 2021ರ ಡಿಸೆಂಬರ್ 24ರಂದು ಭದ್ರಾವತಿಯ ಮನೆಯೊಂದರ ಮೇಲೆ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.